Thursday, July 2, 2009


ಪತ್ರಿಕೆಗಳು ಸಮುದ್ರ...

ಕಾಸರಗೋಡು: ಪತ್ರಿಕೆಗಳು ಮಾಹಿತಿ ಮತ್ತು ವಿಷಯಗಳ ಸಮುದ್ರವಾಗಿದೆ ಎಂದು ನಿವೃತ್ತ ಅಧ್ಯಾಪಕ, ಸಾಹಿತಿ ಎ.ನರಸಿಂಹ ಭಟ್ ಬುಧವಾರ ನಗರದಲ್ಲಿ ಹೇಳಿದರು.
ಇಲ್ಲಿಗೆ ಸಮೀಪದ ನುಳ್ಳಿಪ್ಪಾಡಿ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ಕನ್ನಡ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಸರಕಾರಿ ಕಾಲೇಜಿನ ಉಪನ್ಯಾಸಕ ಎ.ಶ್ರೀನಾಥ್, ಕೃಷ್ಣ ಪೈ ಬದಿಯಡ್ಕ, ಬಾಲಕೃಷ್ಣ ಅಗ್ಗಿತ್ತಾಯ, ಬೊಂಬೆಯಾಟ ಕಲಾವಿದ ಕೆ.ವಿ.ರಮೇಶ್ ಹಾಜರಿದ್ದರು.
ಜಗದೀಶ್ ಕೂಡ್ಲು ಸ್ವಾಗತಿಸಿ, ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು.

No comments:

Post a Comment