Sunday, July 5, 2009

ನ್ಯಾಯಾಂಗ ತನಿಖೆ ಅಗತ್ಯವಿಲ್ಲ: ಆಚಾರ್ಯ

ಮೈಸೂರು: ನಗರದಲ್ಲಿ ನಡೆದ ಕೋಮುಗಲಭೆ ಹಿನ್ನೆಲೆಯಲ್ಲಿ ನಡೆದಿರುವ ಹತ್ಯೆ ಕುರಿತು ನ್ಯಾಯಾಂಗ ತನಿಖೆ ಅಗತ್ಯವಿಲ್ಲವೆಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಸ್ಪಷ್ಟಪಡಿಸಿದ್ದಾರೆ.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 40ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಘಟನೆಯಲ್ಲಿ ಕೆಡಿಎಫ್ ಪಾತ್ರದ ಬಗ್ಗೆ ತಿಳಿದಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಷಯ ತಮ್ಮ ಗಮನಕ್ಕೆ ಬಂದಿದೆ. ಪ್ರಸ್ತುತ ಗಲಭೆ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ತಿಳಿಸಿದರು.ಈ ಪ್ರಕರಣದ ಬಗ್ಗೆ ಜನತೆ ಬೆದರುವ ಅಗತ್ಯವಿಲ್ಲ ಎಂದು ತಿಳಿಸಿದ ಅವರು, ಸ್ಥಳೀಯ ಪೊಲೀಸರೊಂದಿಗೆ ಹೊರಗಿನಿಂದಲೂ ಪೊಲೀಸರನ್ನು ಕರೆಸಿ ಭದ್ರತೆ ಒದಗಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

No comments:

Post a Comment