ಮೈಸೂರು, ಜು. 10 : ಕೋಮುಸೌಹಾರ್ದ ಹಾಳು ಮಾಡುತ್ತಿರುವ ಕೆಎಫ್ ಡಿ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ತಿಳಿಸಿದ್ದಾರೆ.
ಕಿಡಿಗೇಡಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಯುವಮೂರ್ಚಾ ಅಧ್ಯಕ್ಷ ವಿ ಗಿರಿಧರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಸಂಘಟನೆಗಳು ನಿಷೇಧಿಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಆಚಾರ್ಯ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿ ಒಂದು ವರ್ಷವಾಗಿದೆ. ಹಲವು ಸಚಿವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವರ ಸಾಧನೆ ತೃಪ್ತಿಕರವಾಗಿಲ್ಲ. ಅಗಸ್ಟ್ 1 ಮತ್ತು 2 ರಂದು ನಡೆಯುವ ಪಕ್ಷದ ರಾಜ್ಯ ಕಾರ್ಯಕಾರಿಣಿಯಲ್ಲಿ ಅಂಥ ಸಚಿವರಿಗೆ ಸೂಚನೆ ನೀಡಲಾಗುತ್ತದೆ. ನಿಗಮ ಮಂಡಳಿ ಕುರಿತೂ ನಿರ್ಧರಿಸಲಾಗುತ್ತದೆ ಎಂದು ಸದಾನಂದಗೌಡ ಹೇಳಿದರು. ಇತ್ತೀಚೆಗೆ ನಡೆದ ಮೈಸೂರು ಗಲಭೆಯಲ್ಲಿ ಬಿಜೆಪಿ ಕಾರ್ಯಕರ್ತ ಗಿರಿಧರ್ ಗಾಯಗೊಂಡಿದ್ದರು.
Subscribe to:
Post Comments (Atom)
No comments:
Post a Comment