Tuesday, August 18, 2009

ನೀಚರ್ಾಲಿನಲ್ಲಿ ಸ್ವಾತಂತ್ರ್ಯೋತ್ಸವ

ಕಾಸರಗೋಡು: ಮಹಾಪುರುಷರ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ತ್ಯಾಗಿಗಳ ಬಲಿದಾನವನ್ನು ನೆನಪಿಸಿಕೊಳ್ಳಬೇಕು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಕಾನ ಈಶ್ವರ ಭಟ್ ಹೇಳಿದರು.
ಶನಿವಾರ ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಡವರ ಸೇವೆ, ಪರೋಪಕಾರ, ಅಹಿಂಸೆ, ಸತ್ಯ, ಶಾಂತಿ ನಮ್ಮ ಮಂತ್ರವಾಗಬೇಕು. ಆ ಮೂಲಕ ನಮ್ಮ ದೇಶದ ಉದ್ಧಾರ ಆಗಬೇಕು ಎಂದೂ ಅವರು ವಿವರಿಸಿದರು.
ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕೆ.ನಾರಾಯಣ ಭಟ್, ಎಂ.ಸೂರ್ಯನಾರಾಯಣ, ಪ್ರವೀಣ್ ಕುಮಾರ್, ಅವಿತೇಶ್ ಬಿ, ಕೀತರ್ಿ ಬಿ. ಮತ್ತು ಶ್ರೀಶ ಕೆ. ಹಾಜರಿದ್ದರು.
ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿ, ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮುಖ್ಯೋಪಾಧ್ಯಾಯ ರವಿಕೃಷ್ಣ.ಯು ವಂದಿಸಿದರು. ಕಾರ್ಯಕ್ರಮ ಸಂಚಾಲಕ, ಶಾಲಾ ಅಧ್ಯಾಪಕ ಚಂದ್ರಶೇಖರ ರೈ ನಿರೂಪಿಸಿದರು.
`ಸ್ವಾತಂತ್ರ್ಯದ ಸ್ಮೃತಿ' ಹಸ್ತಪ್ರತಿ ಬಿಡುಗಡೆಗೊಳಿಸಲಾಯಿತು. ವಿವಿಧ ಸ್ಪಧರ್ೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾಥರ್ಿಗಳಿಂದ ಸ್ವಾತಂತ್ರ್ಯ ಉಪ್ಪಿನ ಸತ್ಯಾಗ್ರಹದ ಕುರಿತಾದ ಪ್ರಾತ್ಯಕ್ಷಿಕೆ, ಸ್ವಾತಂತ್ರ್ಯ ರೂಪಕ, ದೇಶಭಕ್ತಿಗೀತೆ, ನೃತ್ಯ ಕಾರ್ಯಕ್ರಮಗಳು ಜರುಗಿತು.

--

www.kasaragodvartha.com
  
the first local online news paper in Malayalam.

brings latest news in Malayalam & English || links our home land to the world.

::|:: the signature of Kasaragod ::|::

No comments:

Post a Comment